Share To

Tuesday, 21 February 2017

ರಿಫಾಯೀ ಶೈಖ್ ಅನುಸ್ಮರಣಾ ಪ್ರಯುಕ್ತ ಸಾಂತ್ವನ ಕಾರ್ಯಕ್ರಮ ಮತ್ತು ಹಣ್ಣು ಹಂಪಲು ವಿತರಣೆ

ಎಸ್ಸೆಸ್ಸೆಫ್ ಹಾಗು ಎಸ್ ವೈ ಎಸ್ ಉಳ್ಳಾಲಬೈಲು ಬೊಟ್ಟು ಜಂಟಿ ಆಶ್ರಯದಲ್ಲಿ ರಿಫಾಯೀ ಶೈಖ್ ಅನುಸ್ಮರಣಾ ಪ್ರಯುಕ್ತ ಸಾಂತ್ವನ ಕಾರ್ಯಕ್ರಮ ಮತ್ತು ಹಣ್ಣು ಹಂಪಲು ವಿತರಣೆ ಎಸ್ಸೆಸ್ಸೆಫ್  ಶಾಖಾ ಉಪಾಧ್ಯಕ್ಷ ರಹ್ಮತ್ ಉಳ್ಳಾಲಬೈಲು ರವರ ಅಧ್ಯಕ್ಷತೆಯಲ್ಲಿ ಜರುಗಿತು.
ಎಸ್ಸೆಸ್ಸೆಫ್ ಆಝಾದ್ ನಗರ ಶಾಖಾಧ್ಯಕ್ಷ ಹಾಫಿಝ್ ಮುಈನ್ ಉಳ್ಳಾಲ ದುವಾ ನೆರವೇರಿಸಿದರು. ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕಾರ್ಯದರ್ಶಿ ಅಲ್ತಾಫ್ ಕುಂಪಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ, ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾಧ್ಯಕ್ಷ ಸಿರಾಜುದ್ದೀನ್ ಅಕ್ಕರೆಕೆರೆ ಹಾಗು ಎಸ್ಸೆಸ್ಸೆಫ್ ಎಸ್ ವೈ ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಜೊತೆ ಕಾರ್ಯದರ್ಶಿ ಹಫೀಝ್ ಬೊಟ್ಟು ಸ್ವಾಗತಿಸಿ ಎಸ್ಸೆಸ್ಸೆಫ್ ಉಳ್ಳಾಲ ಬೈಲು ಬೊಟ್ಟು ಶಾಖಾ ಪ್ರಧಾನ ಕಾರ್ಯದರ್ಶಿ ನೌಫಲ್ ಉಳ್ಳಾಲಬೈಲು ಧನ್ಯವಾದಗೈದರು

No comments:

Post a Comment