Share To

Sunday, 30 April 2017

ವೈವಾಹಿಕ ಬದುಕಿಗೆ ಪಾದಾರ್ಪಣೆಗೈದ ಶಿಹಾಬುದ್ದೀನ್ ಅಕ್ಕರೆಕೆರೆ ಇವರಿಗೆ ಸನ್ಮಾನ

ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಇವರ ತಮ್ಮ ಶಿಹಾಬುದ್ದೀನ್ ಅಕ್ಕರೆಕೆರೆ ಸುರಸುಂದರ ಕೋಟ್ಯಾನುಕೋಟಿ ನಿರೀಕ್ಷೆಯೊಂದಿಗೆ ವೈವಾಹಿಕ ಬದುಕಿಗೆ ಪಾದಾರ್ಪಣೆಗೈದರು. ಅಕ್ಕರೆಕೆರೆಯ ಅಬೂಬಕರ್ ಸಿದ್ದೀಖ್ ಮಸ್ಜಿದ್ ನಲ್ಲಿ ನಿಕಾಹ್ ಕಾರ್ಯಕ್ರಮ ನೆರವೇರಿತು.
ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆ ಹಾಗು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ವತಿಯಿಂದ ವೈವಾಹಿಕ ಬದುಕಿಗೆ ಪಾದಾರ್ಪಣೆಗೈದ ಶಿಹಾಬುದ್ದೀನ್ ಇವರಿಗೆ ಮಂಗಳಾಶಂಶೆಯನ್ನು ತಿಳಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಅಕ್ಕರೆಕೆರೆ ಬ್ರಾಂಚ್ ನಿಕಟಪೂರ್ವ ಅಧ್ಯಕ್ಷ ಉಸ್ಮಾನ್ ಸಖಾಫಿ ಪೊಳಲಿ, ಪಟ್ಲ ಮಸೀದಿಯ ಮುದರ್ರಿಸ್ ಶರೀಫ್ ಕಾಮಿಲ್ ಸಖಾಫಿ, ಎಸ್ ವೈ ಎಸ್ ಉಪಾಧ್ಯಕ್ಷ ಅಬ್ದುಲ್ಲತೀಫ್ ಅಕ್ಕರೆಕೆರೆ, ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾ ಪ್ರಧಾನ ಕಾರ್ಯದರ್ಶಿ ಆಸಿಫ್ ಅಕ್ಕರೆಕೆರೆ, ಎಸ್ ವೈ ಎಸ್ ಅಕ್ಕರೆಕೆರೆ ಬ್ರಾಂಚ್ ಕಾರ್ಯಕಾರಿ ಸಮಿತಿ ಸದಸ್ಯರು ಹಾಗು ಶಿಹಾಬುದ್ದೀನ್ ಇವರ ತಂದೆ ಹಸನ್ ಬಾವ ಹಾಜಿ ಉಪಸ್ಥಿತರಿದ್ದರು.

Saturday, 29 April 2017

ಮುಕ್ಕಚ್ಚೇರಿ : ಧ್ವಜ ದಿನಾಚರಣೆ ಹಾಗು ಎಸ್ಸೆಸ್ಸೆಫ್ ಮುಕ್ಕಚ್ಚೇರಿ ಶಾಖೆಯ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಎಸ್ಸೆಸ್ಸೆಫ್ ಸಂಸ್ಥಾಪನಾ ದಿನದ ಅಂಗವಾಗಿ ಎಸ್ಸೆಸ್ಸೆಫ್ ಉಳ್ಳಾಲ ಮುಕ್ಕಚ್ವೇರಿ ಶಾಖೆಯ ಆಶ್ರಯದಲ್ಲಿ ಧ್ವಜ ದಿನಾಚರಣೆ ಹಾಗು ಎಸ್ಸೆಸ್ಸೆಫ್ ಮುಕ್ಕಚ್ಚೇರಿ ಶಾಖೆಯ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷ ಸಯ್ಯಿದ್ ಜಲಾಲ್ ತಂಗಳ್, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್, ಎಸ್ ವೈ ಎಸ್ ಅಕ್ಕರೆಕೆರೆ ಬ್ರಾಂಚ್ ಮಾಜಿ ಅಧ್ಯಕ್ಷ ಉಸ್ಮಾನ್ ಸಖಾಫಿ ಪೊಳಲಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷ ಹೈದರ್ ಮುಕ್ಕಚ್ಚೇರಿ, ಎಸ್ಸೆಸ್ಸೆಫ್ ಮುಕ್ಕಚ್ಚೇರಿ ಶಾಖಾಧ್ಯಕ್ಷ ಅಹ್ಸನ್, ಮುಕ್ಕಚ್ಚೇರಿ ಜುಮಾ ಮಸೀದಿ ಉಸ್ತಾದ್ ಇವರುಗಳ ನೇತ್ರತ್ವದಲ್ಲಿ ಎಸ್ಸೆಸ್ಸೆಫ್ ಮುಕ್ಕಚ್ಚೇರಿ ಶಾಖೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಸಯ್ಯಿದ್ ಜಲಾಲ್ ತಂಗಳ್ ದುವಾ ನೆರವೇರಿಸಿದರು. ಇಮ್ತಿಯಾಝ್ ಮೇಲಂಗಡಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಉಪಾಧ್ಯಕ್ಷ ಮಿಕ್ದಾದ್ ಮುಕ್ಕಚ್ಚೇರಿ, ಮುಸ್ತಫ ಮಾಸ್ಟರ್ ಉಳ್ಳಾಲ ಹಾಗು ಹೈದರಾಕ ಉಪಸ್ಥಿತರಿದ್ದರು.

ಆಝಾದ್ ನಗರ : ಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆ

ಎಸ್ಸೆಸ್ಸೆಫ್ ಸ್ಥಾಪಕ ದಿನ
  ಇದರ ಪ್ರಯುಕ್ತ ಎಸ್ಸೆಸ್ಸೆಫ್  ಆಝಾದ್ ಶಾಖೆಯಲ್ಲಿ  ಬಹಳ ವಿಜೃಂಭಣೆಯಲ್ಲಿ ಎಸ್ಸೆಸ್ಸೆಫ್ ತ್ರಿವರ್ಣ ಪಾತಕೆಯ ದ್ವಜಾರೋಹಣ ಕಾರ್ಯ ನಡೆಯಿತು.
  ದ್ವಜಾರೋಹಣ ಕಾರ್ಯಕ್ರಮಕ್ಕೆ ಗಣ್ಯ ಅತಿಥಿಗಳಾಗಿ ಸಯ್ಯಿದ್ ಜಲಾಲ್ ತಂಙಳ್ , ಸಯ್ಯಿದ್ ಖುಬೈಬ್ ತಂಙಳ್ , ಜಮಾಲುದ್ದೀನ್ ಮುಸ್ಲಿಯಾರ್, , ಉಸ್ಮಾನ್ ಸಖಾಫಿ, , ಫಾರೂಕ್ ಹಿಬಾ ಹಾಗು ಮುಡಿಪು ಸೌತ್ ಸೆಕ್ಟರ್ ಕಾರ್ಯದರ್ಶಿ ಮುಸ್ತಫ ಮದನಿ ಆಗಮಿಸಿದ್ದರು.

ಹಾಗು ಅಸ್ಲಮ್, ಸುಹೈಲ್ ಅಝಾದ್ ನಗರ ಸೈಪುಲ್ಲಾಹ್ ಮುಝಫ್ಫರ್, ಪೈರೂಝ್, ಆದಿಲ್ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ಹಾಫಿಲ್ ಸುಹೈಲ್ ಉಳ್ಳಾಲ

Monday, 24 April 2017

ಎಸ್ಸೆಸ್ಸೆಫ್ ಮುಕ್ಕಚ್ಚೇರಿ : ದಶ ವಾರ್ಷಿಕ ಸಂಭ್ರಮದ ಪ್ರಯುಕ್ತ ಗಡಿಯಾರ ವಿತರಣೆ

ಎಸ್ಸೆಸ್ಸೆಫ್ ಮುಕ್ಕಚ್ಚೇರಿ ಶಾಖೆಯ ದಶ ವಾರ್ಷಿಕ ಸಂಭ್ರಮದ ಪ್ರಯುಕ್ತ ಸರಕಾರಿ ಶಾಲೆ, ಆಸ್ಪತ್ರೆ, ಪೋಲೀಸ್ ಸ್ಟೇಶನ್ ಹಾಗು ಇನ್ನಿತರ ಸ್ಥಳಗಳಿಗೆ ಗಡಿಯಾರ ವಿತರಣಾ ಕಾರ್ಯಕ್ರಮ ಶಾಖಾಧ್ಯಕ್ಷ ಅಹ್ಸನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಕ್ಕಚ್ಚೇರಿ ಮಸೀದಿಯ ಇಮಾಮರಾದ ಅಬ್ದುರ್ರಹ್ಮಾನ್ ಸಅದಿ ಗಡಿಯಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೇಲಂಗಡಿ ಶಾಖಾಧ್ಯಕ್ಷರಾದ ಅಬೂ ಅನಸ್ ಜಮಾಲ್ ಉಸ್ತಾದ್ ಹಾಗು ಮುಸ್ತಫ ಮಾಸ್ಟರ್ ಮುಕ್ಕಚ್ಚೇರಿ ಮಾತನಾಡಿದರು.
ಈ ಸಂದರ್ಭದಲ್ಲಿ ಮುಕ್ಕಚ್ಚೇರಿ ಜುಮಾ ಮಸ್ಜಿದ್ ಅಧ್ಯಕ್ಷರಾದ ಇಸ್ಮಾಯಿಲ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಂಚಾಲಕ ಅಶ್ರಫ್ ಹಾಜಿ ಬಳ್ಳಾರಿ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷ ಹೈದರ್ ಮುಕ್ಕಚ್ಚೇರಿ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಉಪಾಧ್ಯಕ್ಷ ಮಿಕ್ದಾದ್ ಮುಕ್ಕಚ್ಚೇರಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕಾರ್ಯಕಾರಿ ಸಮಿತಿ ಸದಸ್ಯ ಖಲೀಲ್ ಉಳ್ಳಾಲಬೈಲು ಹಾಗು ಫಾರೂಖ್ ಮುಕ್ಕಚ್ಚೇರಿ ಉಪಸ್ಥಿತರಿದ್ದರು.

ಮೌಲಿದು ಮಿಹ್ರಾಜಿನ್ನಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮ ಸಮ್ಮಿಲನ ಹಾಗು ತಹ್ಲೀಲ್ ಸಂಗಮ



ಎಸ್ ವೈ ಎಸ್ ಉಳ್ಳಾಲ ಸೆಂಟರ್ ಹಾಗು ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಜಂಟಿ ಆಶ್ರಯದಲ್ಲಿ ಮೌಲಿದು ಮಿಹ್ರಾಜಿನ್ನಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮ ಸಮ್ಮಿಲನ ಹಾಗು ತಹ್ಲೀಲ್ ಸಂಗಮ ಕೈಕೋವಿನ ಇಲ್ಯಾಸ್ ಪ್ಯಾಲೇಸ್ ನಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್  ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ದುವಾ ನೆರವೇರಿಸಿದರು. ಮಿಹ್ರಾಜ್ ಮೌಲಿದಿನ ನೇತ್ರತ್ವವನ್ನು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಅಳೇಕಲ ವಹಿಸಿದರು. ಎಸ್ಸೆಸ್ಸೆಫ್ ಮೇಲಂಗಡಿ ಶಾಖಾಧ್ಯಕ್ಷರಾದ ಜಮಾಲ್ ಉಸ್ತಾದ್ ಮಿಹ್ರಾಜ್ ದಿನದ ಶ್ರೇಷ್ಟತೆಯನ್ನು ವಿವರಿಸಿದರು. ಬಳಿಕ ನಿನ್ನೆ ( 23-04-2017 ) ಸಮುದ್ರದ ಅಲೆಗೆ ಸಿಲುಕಿ ಆಕಸ್ಮಿಕವಾಗಿ ಮರಣ ಹೊಂದಿದ ಉಳ್ಳಾಲ ಮಾಸ್ತಿಕಟ್ಟೆಯ ಹನೀಫ್ ಮತ್ತು ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಜಲೀಲ್ ಕರೋಪಾಡಿ ಹಾಗು ರಿಯಾಝ್ ಉಸ್ತಾದ್ ಕೊಟ್ಟಮುಡಿ ಮತ್ತು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕಾರ್ಯದರ್ಶಿ ಇಲ್ಯಾಸ್ ಕೈಕೊ ಇವರ ತಂದೆಯ ಮೇಲೆ ತಹ್ಲೀಲ್ ಸಮರ್ಪಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಎಸ್ಸೆಸ್ಸೆಫ್ ಕೋಟೆಪುರ ಶಾಖಾಧ್ಯಕ್ಷ ಮುಝಮ್ಮಿಲ್ ಉಸ್ತಾದ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ, ಸೆಂಟರ್ ಉಪಾಧ್ಯಕ್ಷ ಹೈದರ್ ಮುಕ್ಕಚ್ಚೇರಿ, ಸೆಕ್ಟರ್ ಜೊತೆ ಕಾರ್ಯದರ್ಶಿಗಳಾದ ಹಫೀಝ್ ಬೊಟ್ಟು ಹಾಗು ಇಕ್ಬಾಲ್ ಒಂಭತ್ತುಕೆರೆ, ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾಧ್ಯಕ್ಷ ಸಿರಾಜುದ್ದೀನ್, ಎಸ್ಸೆಸ್ಸೆಫ್ ಒಂಭತ್ತುಕೆರೆ ಶಾಖಾ ಪ್ರಧಾನ ಕಾರ್ಯದರ್ಶಿ ನಿಝಾಂ ಒಂಭತ್ತುಕೆರೆ, ರಾಝಿಖ್ ಒಂಭತ್ತುಕೆರೆ ಹಾಗು ಅನಸ್ ಮೇಲಂಗಡಿ ಉಪಸ್ಥಿತರಿದ್ದರು.


Saturday, 22 April 2017

ಉಳ್ಳಾಲ ಸೆಕ್ಟರ್ : ಇಮಾಮ್ ಶಾಫಿಈ ರ .ಅ ಅನುಸ್ಮರಣೆ ಹಾಗು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಲೀಲ್ ಕರೋಪಾಡಿ ಇವರ ಮೇಲೆ ತಹ್ಲೀಲ್ ಸಮರ್ಪಣೆ

ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಆಶ್ರಯದಲ್ಲಿ ಇಮಾಮ್ ಶಾಫಿಈ ರ .ಅ ಅನುಸ್ಮರಣೆ ಹಾಗು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಲೀಲ್ ಕರೋಪಾಡಿ ಇವರ ಮೇಲೆ ತಹ್ಲೀಲ್ ಸಮರ್ಪಣೆ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಎಸ್ಸೆಸ್ಸೆಫ್ ಕೋಡಿ ದೋಟ ಶಾಖಾ ಕಛೇರಿಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಮೇಲಂಗಡಿ ಶಾಖಾಧ್ಯಕ್ಷರಾದ ಅನಸ್ ಝಿಯಾರತ್ ಟೂರ್ಸ್ ಮಾಲಕ ಅಬೂ ಅನಸ್ ಜಮಾಲ್ ಉಸ್ತಾದ್ ದುವಾ ನೆರವೇರಿಸಿದರು. ಕಾರ್ಯಕ್ರಮವನ್ನು ಉಳ್ಳಾಲ ಸೆಕ್ಟರ್ ಕ್ಯಾಂಪಸ್ ಚೇರಮಾನ್ ಮುಹಮ್ಮದ್ ಮದನಿ ಹಳೆಕೋಟೆ ಉದ್ಘಾಟಿಸಿದರು. ಉಳ್ಳಾಲ ಡಿವಿಷನ್ ಅಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ತಹ್ಲೀಲ್ ಕಾರ್ಯಕ್ರಮಕ್ಕೆ ನೇತ್ರತ್ವ ನೀಡಿ ಅನುಸ್ಮರಣಾ ಭಾಷಣ ಮಾಡಿದರು.
ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಉಪಾಧ್ಯಕ್ಷ ಅತೀಖ್ ಕೋಡಿ, ಸೆಕ್ಟರ್ ಕೋಶಾಧಿಕಾರಿ ಶಬೀರ್ ಪೇಟೆ, ಸೆಕ್ಟರ್ ಕ್ಯಾಂಪಸ್ ಕನ್ವೀನರ್ ಫಾಳಿಲ್ ಮೇಲಂಗಡಿ, ಎಸ್ ಬಿ ಎಸ್ ಉಳ್ಳಾಲ ಝೋನ್ ಸಂಚಾಲಕ ಮುಹಾಝ್ ಬಂಡಿಕೊಟ್ಯ, ಎಸ್ಸೆಸ್ಸೆಫ್ ಆಝಾದ್ ನಗರ ಪ್ರಧಾನ ಕಾರ್ಯದರ್ಶಿ ಮುಝಫ್ಫರ್ ಮಾಸ್ತಿಕಟ್ಟೆ, ಕೋಟೆಪುರ ಶಾಖಾ ಪ್ರಧಾನ ಕಾರ್ಯದರ್ಶಿ ನೌಫಲ್ ಕೋಟೆಪುರ, ಒಂಭತ್ತುಕೆರೆ ಶಾಖಾಧ್ಯಕ್ಷ ತೌಸೀಫ್ ಒಂಭತ್ತುಕೆರೆ, ಒಂಭತ್ತುಕೆರೆ ಪ್ರಧಾನ ಕಾರ್ಯದರ್ಶಿ ನಿಝಾಂ ಒಂಭತ್ತುಕೆರೆ, ಮುಕ್ಕಚ್ಚೇರಿ ಶಾಖಾಧ್ಯಕ್ಷ ಅಹ್ಸನ್, ಉಳ್ಳಾಲಬೈಲು ಜೊತೆ ಕಾರ್ಯದರ್ಶಿ ಅರಫಾತ್  ಉಳ್ಳಾಲಬೈಲು ಹಾಗು ಮುಹಮ್ಮದ್ ಕೈಕೋ ಉಪಸ್ಥಿತರಿದ್ದರು. ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ ಸ್ವಾಗತಿಸಿ ಸೆಕ್ಟರ್ ಜೊತೆ ಕಾರ್ಯದರ್ಶಿ ಹಫೀಝ್ ಬೊಟ್ಟು ಧನ್ಯವಾದಗೈದರು. ಸೆಕ್ಟರ್ ಜೊತೆ ಕಾರ್ಯದರ್ಶಿ ಇಕ್ಬಾಲ್ ಒಂಭತ್ತುಕೆರೆ ನಿರೂಪಿಸಿದರು.

ವರದಿ : ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ
ಮಾಧ್ಯಮ ಕಾರ್ಯದರ್ಶಿ ಎಸ್ ವೈ ಎಸ್ ಉಳ್ಳಾಲ ಸೆಂಟರ್

Saturday, 15 April 2017

ವೈವಾಹಿಕ ಬದುಕಿಗೆ ಪಾದಾರ್ಪಣೆಗೈದ ಶಾಹುಲ್ ಹಮೀದ್ ಜೌಹರಿಗೆ ಸನ್ಮಾನ

ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಕಾರ್ಯಕಾರಿ ಸಮಿತಿ ಸದಸ್ಯ, ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾ ಉಪಾಧ್ಯಕ್ಷ ಹಾಗು ಎಸ್ಸೆಸ್ಸೆಫ್ ಉಳ್ಳಾಲಬೈಲು ಬೊಟ್ಟು ಶಾಖಾ ಉಸ್ತುವಾರಿ ಶಾಹುಲ್ ಹಮೀದ್ ಜೌಹರಿ SYS ಮುಡಿಪು ಸೆಂಟರ್ ಆಶ್ರಯದಲ್ಲಿ ಸುಲ್ತಾನುಲ್ ಉಲಮಾ ಎಪಿ ಉಸ್ತಾದರ ನೇತ್ರತ್ವದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವೈವಾಹಿಕ ಸುರ ಸುಂದರ ಬದುಕಿಗೆ ಪಾದಾರ್ಪಣೆಗೈದರು. ನಿಕಾಹ್ ಸಂಭ್ರಮದ ಬಳಿಕ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ವತಿಯಿಂದ ಶಾಹುಲ್ ಹಮೀದ್ ಜೌಹರಿ ಇವರಿಗೆ ವೈವಾಹಿಕ ಮಂಗಳಾಶಂಶೆಯನ್ನು ಅರ್ಪಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ ಉಳ್ಳಾಲ, ಎಸ್ ವೈ ಎಸ್ ಅಕ್ಕರೆಕೆರೆ ಬ್ರಾಂಚ್ ನಿಕಟಪೂರ್ವ ಅಧ್ಯಕ್ಷ ಉಸ್ಮಾನ್ ಸಖಾಫಿ ಪೊಳಲಿ, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಕೋಶಾಧಿಕಾರಿ ಅಬ್ದುರ್ರಹ್ಮಾನ್ ಅಕ್ಕರೆಕೆರೆ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್, ನಾಝಿಂ ಮುಕ್ಕಚ್ಚೇರಿ, ಅಝೀಝ್ ಸಖಾಫಿ ಅಕ್ಕರೆಕೆರೆ, ಇಮ್ರಾನ್ ಕೋಟೆಪುರ ಉಪಸ್ಥಿತರಿದ್ದರು.