Share To

Saturday, 30 September 2017

ಸ್ನೇಹ ಸಭೆ ಹಾಗು ಸನ್ಮಾನ ಸಮಾರಂಭ ಕಾರ್ಯಕ್ರಮ

SSF ಉಳ್ಳಾಲ ಸೆಕ್ಟರ್ ಆಶ್ರಯದಲ್ಲಿ ಸ್ನೇಹ ಸಭೆ ಹಾಗು ಸನ್ಮಾನ ಸಮಾರಂಭ ಕಾರ್ಯಕ್ರಮ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಉಳ್ಳಾಲ ಆಝಾದ್ ನಗರದ ಇಸ್ಲಾಮಿಕ್ ನಾಲೇಜ್ ಸೆಂಟರಿನಲ್ಲಿ ನಡೆಯಿತು.
ಮಲ್ಜಹ್ ಕ್ಯಾಂಪಸ್ಸಿನಲ್ಲಿ ನಡೆಯಲಿರುವ 4g ಕ್ಯಾಂಪಿನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ಈ ಸಂದರ್ಭದಲ್ಲಿ ನಡೆಯಿತು.
SSF ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ದ.ಕ ಜಿಲ್ಲಾ ಎಸ್ಸೆಸ್ಸೆಫ್ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಹಾಗು ಕೆಲಸ ನಿಮಿತ್ತ ಪ್ರಯಾಣ ಬೆಳೆಸಲಿರುವ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಜೊತೆ ಕಾರ್ಯದರ್ಶಿ ಹಫೀಝ್ ಬೊಟ್ಟು ಇವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಶರೀಫ್ ಸಅದಿ ಸುಂದರಭಾಗ್ ಹಾಗು ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಮಾತನಾಡಿದರು.

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ ಹಾಗು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ಬಸ್ತಿಪಡ್ಪು ಉಪಸ್ಥಿತರಿದ್ದರು. ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಹಫೀಜ್ ಬೊಟ್ಟು ಧನ್ಯವಾದಗೈದರು

Wednesday, 27 September 2017

ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆಯ ವತಿಯಿಂದ ವಿಶ್ವ ಸಾಕ್ಷರತಾ ದಿನದ ಅಂಗವಾಗಿ ಇಖ್ರಾ ಡೇ ಸಂಗಮ ಹಾಗು VIBGYOR ಪ್ರೋಗ್ರಾಂ

ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆಯ ವತಿಯಿಂದ ವಿಶ್ವ ಸಾಕ್ಷರತಾ ದಿನದ ಅಂಗವಾಗಿ ನಡೆದ ಇಖ್ರಾ ಡೇ ಸಂಗಮ ಹಾಗು VIBGYOR ಪ್ರೋಗ್ರಾಂ

Wednesday, 20 September 2017

SSF ಅಕ್ಕರೆಕೆರೆ ಶಾಖಾ ಆಶ್ರಯದಲ್ಲಿ ಸಂಸ್ಥಾಪನಾ ದಿನದ ಅಂಗವಾಗಿ ಧ್ವಜ ದಿನಾಚರಣಾ ಕಾರ್ಯಕ್ರಮ


ಉಳ್ಳಾಲ : ಯುವ ಸಮೂಹವು ಮಾದಕ ವಸ್ತುಗಳ ದಾಸರಾಗಿ,  ಕೆಡುಕಿನತ್ತ ವಾಲುತ್ತಿರುವಾಗ ಅವರನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಕೆಡುಕುಗಳಿಂದ ಒಳಿತಿನೆಡೆಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಜಾಗ್ರತಿ ಮೂಡಿಸುವ ಕಾರ್ಯ ಎಸ್ಸೆಸ್ಸೆಫ್ ನಿಂದ ನಡೆಯುತ್ತಿದೆ ಎಂದು ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ತಿಳಿಸಿದರು. ಅವರು ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾ ಆಶ್ರಯದಲ್ಲಿ ಎಸ್ಸೆಸ್ಸೆಫ್ ನ ಇಪ್ಪತ್ತೊಂಭತ್ತನೇ ಸಂಸ್ಥಾಪನಾ ದಿನದ ಅಂಗವಾಗಿ ಉಳ್ಳಾಲ ಅಕ್ಕರೆಕೆರೆಯಲ್ಲಿ ನಡೆದ ಧ್ವಜ ದಿನಾಚರಣೆಯ ಕಾರ್ಯಕ್ರಮಕ್ಕೆ ಪ್ರಾರ್ಥನೆಯ ಮೂಲಕ ಚಾಲನೆ ನೀಡಿ ಮಾತನಾಡಿದರು. ಶಾಖಾಧ್ಯಕ್ಷ ಶಾಹುಲ್ ಹಮೀದ್ ಜೌಹರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
           

ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್, ಎಸ್ ವೈ ಎಸ್ ಸಾಂತ್ವನ ವಿಭಾಗದ ಮುಕ್ಕಚ್ಚೇರಿ ಸಂಚಾಲಕ ಮುಸ್ತಫ ಮಾಸ್ಟರ್, ಉಳ್ಳಾಲ ಎಸ್ ವೈ ಎಸ್ ನ ಹಿರಿಯ ಮೇಧಾವಿ ಹಸನ್ ಹಾಜಿ ಪಟೇಲ್ ಕಂಪೌಂಡ್ ಹಾಗು ಎಸ್ಸೆಸ್ಸೆಫ್ ಕಾರ್ಯಕರ್ತರ ಭಾಗೀದಾರಿಕೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಎಲ್ಲರೂ ಕೈ ಜೋಡಿಸಿದರು. ಬಳಿಕ ಮುಸ್ತಫ ಮಾಸ್ಟರ್ ಮುಕ್ಕಚ್ಚೇರಿ ಹಾಗು ಸಯ್ಯಿದ್ ಖುಬೈಬ್ ತಂಗಳ್ ಪ್ರಾಸ್ತಾವಿಕವಾಗಿ ಮಾತನಾಡಿದರು.
                 ಎಸ್ಸೆಸ್ಸೆಫ್ ಅಕ್ಕರೆಕೆರೆ ಕ್ಯಾಂಪಸ್ ಕಾರ್ಯದರ್ಶಿ ಮುಂಶೀದ್, ಎಸ್ ಬಿ ಎಸ್ ಅಕ್ಕರೆಕೆರೆ ಸಂಚಾಲಕ ಇರ್ಫಾನ್ ಪಟೇಲ್ ಕಂಪೌಂಡ್, ಮುಝಯ್ಯಿನ್, ಸೈಝಾನ್, ಸಾಹಿಲ್ ಮತ್ತಿತ್ತರರು ಉಪಸ್ಥಿತರಿದ್ದರು. ಅಕ್ಕರೆಕೆರೆ ಶಾಖಾ ಪ್ರಧಾನ ಕಾರ್ಯದರ್ಶಿ ಜಿಶಾನ್ ಸ್ವಾಗತಿಸಿ ಕೋಶಾಧಿಕಾರಿಯಾದ ಸಿರಾಜುದ್ದೀನ್ ಧನ್ಯವಾದಗೈದರು.